Thursday 30 March 2017

ಘಟ್ಟದಿಂದ ಬೆಟ್ಟದ ಕೆಳಗೆ ನೋಡಿದ ಕಾರ್ತಿಕ್ ................

ಧನಂಜಯ ಮಡಿಕೇರಿ

          ಹಸ್ತಕ್ಕೆ ಬರಿ ನಕ್ಕೆ ಓದುತ್ತಾ  ಓದುತ್ತಾ ಮಸ್ತಕಕ್ಕಿಟ್ಟು ಗಂಭೀರವಾದೆ, ವಿಸ್ತರದ ದರ್ಶನಕ್ಕೆ ತುತ್ತ ತುದಿಯಲ್ಲಿ ನಿನ್ನ ಪುಸ್ತಕಕ್ಕೆ ಕೈ ಮುಗಿದೆ. ಇದು ಕವಿ ಕುವೆಂಪು ಕಗ್ಗ ಓದಿದ ನಂತರ ಊದಿದ  ಕಹಳೆ " ಕಾಡು ಹಾದಿಯ ಜಾಡು ಹತ್ತಿ " ಕಾರ್ತಿಕ್ ಮಾಡಿದ ಪ್ರಯಾಣ ಓದುಗನಿಗೆ ಎಲ್ಲೂ  ಪ್ರಯಾಸವಾಗುವುದಿಲ್ಲ. ತಮ್ಮ ಮೊದಲ ಪ್ರಯತ್ನದಲ್ಲಿ ಮಲೆನಾಡು ಅದರ ಸೌಂದರ್ಯ ಮತ್ತು ಅನಿವಾರ್ಯತೆ , ದಿನ ನಿತ್ಯದ ಬದುಕಿನಲ್ಲಿ ಸಾಮನ್ಯ ಬದುಕಿನ  ದರ್ಶನ , ಅದನ್ನು ಸಾಹಿತ್ಯಕ್ಕೆ ಇಳಿಸಿದ ರೀತಿ ಸುಂದರವಾಗಿದೆ . ಪಶ್ಚಿಮ ಘಟ್ಟದ ತಪ್ಪಲಿನ ಮಂದಿಗೆ ತುಳು , ಬ್ಯಾರಿ , ಮಲಯಾಳಂ ಹವ್ಯಕ ಕನ್ನಡ ಸಮಸ್ಯೆಯೆಂದು ನನಗನಿಸುವುದಿಲ್ಲ. ಹಾಗಾಗಿ ಕೃತಿಯಲ್ಲಿ ಭಾಷೆ ಕಷ್ಟವಾಗದೆ ಇಷವಾಗಿ ಓದಿಸಿ ಕೊಂಡು ಹೋಗುತ್ತದೆ.
        “ಅವಳೊಂದು ಪುಟ್ಟ ಕೊಳ ನನ್ನ ಬಾಳಿನ ಜೀವ ಜಲ”  ಎನ್ನುವ ಹಾಗೆ ಮಲೆನಾಡು, ಸಹ್ಯಾದ್ರಿ, ಪಶ್ಚಿಮ ಘಟ್ಟ ಯಾವುದೇ ಹೆಸರಿನಿಂದ ಕರೆಯಿರಿ  ಜೀವ ಸಂಕುಲಕ್ಕೆ ಅದರ ಅನಿವಾರ್ಯತೆ ಏನು? ಆ ಪ್ರಕೃತಿ ಬದುಕಿನಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎನ್ನುವುದನ್ನು ದಂಗೆಯ ದಿನಗಳು ನೆನಪಿಸಿದರೆ. ಬನದ ಹರಕೆಯೊಂದಿಗೆ ಆನೆಯ ಆಗಮನವಾಗುತ್ತೆ, ಅದರೊಂದಿಗೆ ಆನೆಗೆ ನಾವು ಅರಣ್ಯದ ಮಧ್ಯೆ ಅಷ್ಟು ಕೆರೆ ತೆಗೆಸಿದ್ದೇವೆ, ಅದಕ್ಕೆ ಆಹಾರಕ್ಕೆ ಬೇಕಾಗಿರುವ ಮರಗಳನ್ನು ಬೆಳೆಸಿದ್ದೇವೆ, ಎನ್ನುವ ಶಾಸಕನೊಬ್ಬ ಏಕ ಕಾಲದಲ್ಲಿ ಆನೆ ಮತ್ತು ಪ್ರಜೆಗೆ ಮೋಸಮಾಡುತ್ತಾನೆ  ಕೃತಿಕಾರ ಆತನನ್ನು ಬೆತ್ತಲಾಗಿಸಿದ್ದಾರೆ. ಮಧ್ಯದಲ್ಲಿ ಚಿಕಿತ್ಸೆಗೆ ಇಟ್ಟಿದ್ದ ಹಣ ಕಳೆದು ಹೋಗುತ್ತೆ ಅಂತಹ ಸಂಧರ್ಭದಲ್ಲಿ ಧರ್ಮ ಮತ್ತು ಜಾತಿಗಿಂತ ಹೆಚ್ಚಾಗಿ ಮಾನವೀಯತೆ ರಾರಾಜಿಸುತ್ತದೆ, ಎಲ್ಲೋ ಒಂದು ಕಡೆ ಕೃತಿಯ ಜಾಡು ಹಿಡಿದು ಹೊರಟಾಗ ಕೃತಿಕಾರ ಹೇಳಿದಂತೆ ಮಹಾಗುರು ತೇಜಸ್ವಿಗೆ ಸಿಕ್ಕ ಮರ-ಗಿಡ, ಹಳ್ಳಿಯ ಭಾಷೆ-ಬೈಗುಳ ಸಾಹಿತ್ಯದ  ಎಲ್ಲವೂ ಮಹಾಗುರುವನ್ನು ನೆನೆಪಿಸಿವಂತೆ ಮಾತನಾಡುತ್ತೆ. ದೂರದ ಬೆಟ್ಟ ನುಣ್ಣಗೆ ಎನ್ನುವಂತೆ ಬಣ್ಣ ಬಣ್ಣದ ಮುಖವಾಡದ ಬೆಂಗಳೂರು  ಈ ಮೊದಲೆ ನಮ್ಮ ಮನಸಿನಲ್ಲಿ ಮೂಡಿದ ಚಿತ್ರ ಸ್ಪಷ್ಟವಾಗುವಂತೆ ಮಾಡುತ್ತೆ.

     ಕೆಲವೊಂದು ಹೊಡೆತಗಳು ನಮ್ಮ ಬಡತನಕ್ಕೆ ಸ್ವಾಭಿಮಾನಕ್ಕೆ ಮತ್ತು ಅಸಾಯಕತೆಗೆ ಬಿದ್ದ ಏಟುಗಳು ಎಂದು ಕೃತಿಕಾರರೇ ಹೇಳಿರುವ ಹಾಗೆ ಅದು ಹಾಗೆ ಆಗಿದ್ದರೆ ಮಾತ್ರ ನಮ್ಮ ಕಾರ್ಯವಾಗಲಿ ಕವನ ಕಾವ್ಯವಾಗಲಿ ಗಟ್ಟಿತನ ಪಡೆದುಕೊಳ್ಳುವುದಕ್ಕೆ ಸಾಧ್ಯ.. ನೀರಿನ ಮಹತ್ವದಿಂದ ಮೊದಲುಗೊಂಡು ನೀರೆಯ ನೋವಿನೊಂದಿಗೆ ಅಂತ್ಯವಾಗುವ ಕೃತಿ ತನ್ನ ಬಾಲ್ಯದೊಂದಿಗೆ ನಲಿಯುತ್ತಾ-ಕಲಿಯುತ್ತಾ ಒಂದು ಪ್ರೀತಿಯ  ಕಥೆಗೆ ಬಂದು ನಿಂತಿರುವುದು ಅಭಿನಂದನಾರ್ಹ. ಮುಂದಿನ ದಿನಗಳಲ್ಲಿ ಕೃತಿಕಾರನ ಲೇಖನಿಯಿಂದ ಮತ್ತಷ್ಟು ಬರಹ ಮೂಡಬಹುದು ಎಂದು ನಿರೀಕ್ಷೆ ನನ್ನದು. 

No comments:

Post a Comment